ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Farmer List) ಯೋಜನೆಯು ಭಾರತದ ಕೃಷಿ ಕ್ಷೇತ್ರದ ಬೆನ್ನೆಲುಬಾದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಪ್ರಸ್ತುತ ಹಳ್ಳಿವಾರು ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
2019ರಲ್ಲಿ ಆರಂಭವಾದ ಈ ಯೋಜನೆಯು ರೈತ ಕುಟುಂಬಗಳಿಗೆ(Kisan Samman Nidhi Yojana) ವಾರ್ಷಿಕವಾಗಿ 6,000 ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ (ಪ್ರತಿ ಕಂತಿಗೆ 2,000 ರೂ.) ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯ ಆರ್ಥಿಕ ನೆರವನ್ನು ನೇರವಾಗಿ DBT ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಇದನ್ನೂ ಓದಿ: Education Loan-ಶೇ. 2ರ ಬಡ್ಡಿದರಲ್ಲಿ 1.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ ಆಹ್ವಾನ!
ಇತ್ತೀಚೆಗೆ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಅರ್ಹ ರೈತರ ಪಟ್ಟಿಯನ್ನು ಸಹ ಘೋಷಿಸಲಾಗಿದೆ. ಈ ಲೇಖನದಲ್ಲಿ ಪಿಎಂ ಕಿಸಾನ್(Kisan Samman) ಯೋಜನೆಯ ವಿವರಗಳು, ಅರ್ಹ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು ಎನ್ನುವ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.
PM Kisan-ಪಿಎಂ ಕಿಸಾನ್ ಯೋಜನೆಯ ಉದ್ದೇಶ:
ಪಿಎಂ ಕಿಸಾನ್ ಯೋಜನೆಯ ಪ್ರಮುಖ ಉದ್ದೇಶವೆಂದರೆ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಮತ್ತು ಕೃಷಿ ಚಟುವಟಿಕೆಗಳಿಗೆ ಬೇಕಾದ ಆರ್ಥಿಕ ಸಹಾಯವನ್ನು ಒದಗಿಸುವುದು. ಈ ಯೋಜನೆಯು ರೈತರನ್ನು ಸಾಲದ ಬಂಧನದಿಂದ ಮುಕ್ತಗೊಳಿಸಿ, ಕೃಷಿಗೆ ಸಂಬಂಧಿಸಿದ ಖರ್ಚುಗಳನ್ನು ಭರಿಸಲು ಸಹಾಯ ಮಾಡುತ್ತದೆ.
ಬಿತ್ತನೆ, ಗೊಬ್ಬರ, ಕೀಟನಾಶಕಗಳ ಖರೀದಿ, ಮತ್ತು ಇತರ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಈ ಹಣವನ್ನು ಬಳಸಿಕೊಳ್ಳಬಹುದು. ಇದರ ಜೊತೆಗೆ, ಈ ಆರ್ಥಿಕ ಸಹಾಯವು ರೈತ ಕುಟುಂಬಗಳ ದೈನಂದಿನ ಜೀವನದ ಅಗತ್ಯಗಳನ್ನು ಪೂರೈಸಲು ಸಹ ನೆರವು ನೀಡುತ್ತದೆ.
ಇದನ್ನೂ ಓದಿ: Nursing scholarship-ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!
PM Kisan Eligible Farmers List-ಪಿಎಂ ಕಿಸಾನ್ ಅರ್ಹ ರೈತರ ಪಟ್ಟಿ:
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ರೈತರು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಪಟ್ಟಿಯನ್ನು ನೋಡಿಕೊಳ್ಳಬಹುದು.
Step-1: ಮೊದಲಿಗೆ ಇಲ್ಲಿ ಕ್ಲಿಕ್ “PM Kisan Eligible Farmers List” ಮಾಡಿ ಅಧಿಕೃತ ಜಾಲತಾಣವನ್ನು ಪವೇಶ ಮಾಡಬೇಕು.
ಇದನ್ನೂ ಓದಿ: IDFC Bank Scholarship-ಐಡಿಎಫ್ಸಿ ಬ್ಯಾಂಕ್ ನಿಂದ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

Step-2: ಬಳಿಕ ಅಧಿಕೃತ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಜಾಲತಾಣ ತೆರೆದುಕೊಳ್ಳುತ್ತದೆ ಇಲ್ಲಿ ಮುಖಪುಟದಲ್ಲಿ ಕಾಣುವ “Beneficiary List” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ಇದಾದ ಬಳಿಕ ಈ ಪೇಜ್ ನಲ್ಲಿ ರೈತರು ರಾಜ್ಯ-Karnataka ಎಂದು ಆಯ್ಕೆ ಮಾಡಿಕೊಂಡು ಬಳಿಕ ನಿಮ್ಮ ಜಿಲ್ಲೆ,ತಾಲ್ಲೂಕು,ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು “Get Report” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ತೆರೆದುಕೊಳ್ಳುತ್ತದೆ ಒಮ್ಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಚೆಕ್ ಮಾಡಿಕೊಳ್ಳಿ.
PM Kisan 20th Installment-ಶೀಘ್ರದಲ್ಲೇ ರೈತರ ಖಾತೆಗೆ 20ನೇ ಕಂತಿನ ಹಣ ಬಿಡುಗಡೆ:
ಕೇಂದ್ರ ಸರ್ಕಾರವು ಅರ್ಹ ರೈತರ ಖಾತೆಗೆ ನಾಲ್ಕು ತಿಂಗಳಿಗೆ ಒಮ್ಮೆ ಪ್ರತಿ ವರ್ಷ ರೂ 2,000/- ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ ಇದರನ್ವಯ 20ನೇ ಕಂತಿನ ಹಣವನ್ನು ಜುಲೈ-2025 ರ ಒಳಗಾಗಿ ದೇಶದ ಎಲ್ಲಾ ಅರ್ಹ ರೈತರ ಖಾತೆಗೆ ಜಮಾ ಅಗಲಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Mobile Canteen Scheme-₹5 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟಿನ್ ತೆರೆಯಲು ಅರ್ಜಿ!
PM Kisan e-KYC: ಕಿಸಾನ್ ಸಮ್ಮಾನ್ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ:
ಕೃಷಿ ಇಲಾಖೆಯಲ್ಲಿ ಇ-ಕೆವೈಸಿ ಮಾಡಿ/PM Kisan e-KYC :- ಇ-ಕೆವೈಸಿ ಮಾಡದೇ ಇದ್ದರೆ ಕೂಡಲೇ ನಿಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಿ.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್/Bank Account Aadhar link :- ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳದವರು ತಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ಕೆವೈಸಿಯನ್ನು ಮಾಡಿಕೊಳ್ಳಿ.
ಬ್ಯಾಂಕ್ ನಲ್ಲಿ ಇ-ಕೆವೈಸಿ ಮಾಡಿ/Bank e-KYC :- ಒಂದಿಷ್ಟು ರೈತರು ಬ್ಯಾಂಕ್ ಅಕೌಂಟ್ ಇರುವ ಶಾಖೆಯಲ್ಲಿ ಪಾನ್ ಕಾರ್ಡ, ಆಧಾರ್ ಕಾರ್ಡ್,ಪೋಟೊ ಸಲ್ಲಿಸಿ ಇ-ಕೆವೈಸಿ ಮಾಡಿಕೊಳ್ಳುವುದು ಅವಶ್ಯವಿರುವುದರಿಂದ ಈ ರೀತಿಯ ಅರ್ಜಿದಾರರು ಕೂಡಲೇ ತಮ್ಮ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿ ಕೆವೈಸಿಯನ್ನು ಮಾಡಿಸಿಕೊಳ್ಳಿ.
ಇದನ್ನೂ ಓದಿ: Girl child scheme-18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1.50 ಲಕ್ಷ ಸಹಾಯಧನ!
For More Information-ಹೆಚ್ಚಿನ ಮಾಹಿತಿಗಾಗಿ:
ಕಿಸಾನ್ ಸಮ್ಮಾನ್ ಅಧಿಕೃತ್ ಲಿಂಕ್/Kisan Sammn Website- Click Here
ಸಹಾಯವಾಣಿ/Kisan Samman Helpline- 1800 180 1551