2025-26 ನೇ ಸಾಲಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅಡಿಯಲ್ಲಿ(Ganga Kalyana Scheme) ಕರ್ನಾಟಕ ಸರ್ಕಾರವು ಸ್ವಯಂ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಪ್ರೇರೇಪಿಸಲು ವಾಸವಿ ಜಲಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ಶೇ.4 ರ ಬಡ್ಡಿದರದಲ್ಲಿ ₹2.75 ಲಕ್ಷ ಸಾಲ ಮತ್ತು ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯು ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯಾಗಿದ್ದು,(Farmers Borewell Aid) ಬಡ ಹಾಗೂ ಮದ್ಯಮ ವರ್ಗದ ಅಂದರೆ ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ, ಯುವಕರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ವ್ಯವಸಾಯವನ್ನು ಪ್ರಾರಂಭಿಸಿ ಸ್ವಯಂ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಪ್ರೇರೆಪಿಸಲು ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಲಾಗಿದೆ. ಈ ಸದುಪಯೋಗವನ್ನು ಪಡೆದುಕೊಳ್ಳಲು ಆಶ್ವಾಸನೆ ನೀಡಲಾಗಿದೆ.
ಇದನ್ನೂ ಓದಿ: Health Insurance-ಇನ್ಮುಂದೆ ಈ ಯೋಜನೆಯಡಿ ಸಿಗಲಿದೆ ₹5 ಲಕ್ಷ ಉಚಿತ ಚಿಕಿತ್ಸಾ ಸೌಲಭ್ಯ!
ಈ ಯೋಜನೆಯಡಿ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ಕೊಳವೆಬಾವಿ, ಪಂಪ್ಸೆಟ್ ಅಳವಡಿಸಲು ಸಾಲ ಮತ್ತು ಸಹಾಯಧನವನ್ನು ನೀಡಲಾಗುತ್ತಿದ್ದು, ಪ್ರಸ್ತುತ ಈ ಲೇಖನದಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅಗತ್ಯ ದಾಖಲೆಗಳೇನು? ಈ ಯೋಜನೆಯ ಉದ್ದೇಶವೇನು? ಅರ್ಜಿಯನ್ನು ಸಲ್ಲಿಸಲು ವಿಧಾನ? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Subsidy Information-ಈ ಯೋಜನೆಯ ಸಹಾಯಧನದ ವಿವರಗಳು ಈ ಕೆಳಗಿನಂತಿದೆ:
ಈ ಯೋಜನೆಯಡಿ ಬೋರ್ವೆಲ್ ಕೊರೆಸಲು ₹2.75 ಲಕ್ಷದವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.3.75 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.2.25 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.
ಇದನ್ನೂ ಓದಿ: Cow Mat Subsidy-ಪಶುಪಾಲನೆ ಇಲಾಖೆಯಿಂದ 90% ಸಬ್ಸಿಡಿಯಲ್ಲಿ ಕೌ ಮ್ಯಾಟ್!
ಕೆಲವು ಜಿಲ್ಲೆಗಳಲ್ಲಿ ಘಟಕದ ವೆಚ್ಚವು ₹4.75 ಲಕ್ಷದವರೆಗೆ ಇರಬಹುದು, ಇದರಲ್ಲಿ ₹75,000 ವಿದ್ಯುತ್ ಅವಶ್ಯಕತೆಗಾಗಿ ಮೀಸಲಿಡಲಾಗುತ್ತದೆ. ಇತರ ಜಿಲ್ಲೆಗಳಿಗೆ ಘಟಕದ ವೆಚ್ಚವು ₹3.75 ಲಕ್ಷವಾಗಿದ್ದು, ₹3.25 ಲಕ್ಷ ಸಹಾಯಧನವಾಗಿ ಮತ್ತು ₹50,000 ಕಡಿಮೆ ಬಡ್ಡಿದರದ ಸಾಲವಾಗಿ (4% ಬಡ್ಡಿ) ಒದಗಿಸಲಾಗುತ್ತದೆ.
ಬೋರ್ವೆಲ್ಗೆ ಉಚಿತ ಪಂಪ್ಸೆಟ್ ಮತ್ತು ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತದೆ, ಇದರಿಂದ ರೈತರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಭಾರವನ್ನು ಕಡಿಮೆ ಮಾಡುವ ಉದ್ದೇಶವಾಗಿದೆ.
Last Date For Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:31-07-2025
ಇದನ್ನೂ ಓದಿ: PM Kisan Farmer List-ಪಿಎಂ ಕಿಸಾನ್ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!
Purpose OF This Scheme-ಈ ಯೋಜನೆಯ ಪ್ರಮುಖ ಉದ್ದೇಶಗಳು:
ನೀರಾವರಿ ಸೌಲಭ್ಯ ಒದಗಿಸುವುದು: ನೀರಿನ ಕೊರತೆಯಿಂದ ಬಳಲುತ್ತಿರುವ ರೈತರಿಗೆ ಬೋರ್ವೆಲ್ ಕೊರೆಯುವ ಮೂಲಕ ಸ್ಥಿರ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವುದು.
ಕೃಷಿ ಉತ್ಪಾದಕತೆ ಹೆಚ್ಚಿಸುವುದು: ತೋಟಗಾರಿಕೆ ಬೆಳೆಗಳು ಮತ್ತು ಇತರ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆಯನ್ನು ಖಾತ್ರಿಪಡಿಸುವುದು.
ಆರ್ಥಿಕ ಸಬಲೀಕರಣ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಾಯ ಮಾಡುವುದು.
ಗ್ರಾಮೀಣ ಆರ್ಥಿಕತೆಯ ಬಲವರ್ಧನೆ: ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು.
ಇದನ್ನೂ ಓದಿ: Education Loan-ಶೇ. 2ರ ಬಡ್ಡಿದರಲ್ಲಿ 1.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ ಆಹ್ವಾನ!

ಇದನ್ನೂ ಓದಿ: Nursing scholarship-ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!
Who Can Apply-ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು:
1) ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
2) ಅರ್ಜಿದಾರ ರೈತರು ಕನಿಷ್ಠ 2 ಎಕರೆ ಮತ್ತು ಗರಿಷ್ಠ 15 ಎಕರೆ ಜಮೀನು ಹೊಂದಿರಬೇಕು.
3) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿರುವವರಿಗೆ ₹98,000 ಮೀರಿರಬಾರದು.
4) ಹಾಗೂ ನಗರ ಪ್ರದೇಶದವರಿಗೆ ₹1.20 ಲಕ್ಷ ಮೀರಿರಬಾರದು.
5) ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಮೀರಿರಬಾರದು.
6) ಎಲ್ಲಾ ವರ್ಗದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
7) ಅರ್ಜಿದಾರರಿಗೆ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡುವ ಆಸಕ್ತಿಯನ್ನು ಹೊಂದಿರಬೇಕು.
8) ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಯಾವುದೆ ಸರ್ಕಾರಿ ಕೆಲಸದಲ್ಲಿ ಕೆಲಸ ಮಾಡುತ್ತಿದ್ದರೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ: IDFC Bank Scholarship-ಐಡಿಎಫ್ಸಿ ಬ್ಯಾಂಕ್ ನಿಂದ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!
How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ:
ಜಲಶಕ್ತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಪ್ರಥಮದಲ್ಲಿ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ನಿಗಮದ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ “ಅಪ್ಲೆ ಆನ್ಲೈನ್” ಬಟನ್ ಮೇಲೆ ಕ್ಲಿಕ್ ಮಾಡಿ “ವಾಸವಿ ಜಲಶಕ್ತಿ ಯೋಜನೆ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕೆಳಗೆ “Click To Proceed” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ಗೆ ಪ್ರವೇಶ ಪಡೆಯಬೇಕು. ಈ ಪೇಜ್ ನಲ್ಲಿ ಅರ್ಜಿದಾರರು ತಮ್ಮ ಆಧಾರ್ ಕಾರ್ಡ ನಂಬರ್ ಮತ್ತು ಮೊಬೈಲ್ ನಂಬರ್ ಗೆ ಬರುವ OTP ಆನ್ನು ನಮೂದಿಸಿ ಲಾಗಿನ್ ಅಗಬೇಕು.
Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: Mobile Canteen Scheme-₹5 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟಿನ್ ತೆರೆಯಲು ಅರ್ಜಿ!
Documents required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು?
- ಆಧಾರ್ ಕಾರ್ಡ್/Aadhar card
- ರೇಷನ್ ಕಾರ್ಡ್/Ration card
- ಜಾತಿ ಪ್ರಮಾಣ ಪತ್ರ/Cast Certificate
- ಆದಾಯ ಪ್ರಮಾಣ ಪತ್ರ/Income Certificate
- ಜಮೀನಿನ ದಾಖಲೆಗಳು/RTC
- ಫೋಟೊ/Photocopy
- ಬ್ಯಾಂಕ್ ಪಾಸ್ಬುಕ್/Bank Passbook
- ರೈತರ FRUITS ID ನಂಬರ್/ID number
- ಮೊಬೈಲ್ ನಂಬರ್/Mobile number