2025-26ನೇ ಸಾಲಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ(Vokkaliga Nigama) ವಿವಿಧ ಯೋಜನೆಯಡಿ ಸಾಲ ಮತ್ತು ಸಬ್ಸಿಡಿಯನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಯಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gowda)/ ಗೌಡ (Gouda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಮೆ, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ / ಉತ್ತಮ ಕೊಳಗ ಸಮುದಾಯಕ್ಕೆ
ಇದನ್ನೂ ಓದಿ: Ration card-ರೇಷನ್ ಕಾರ್ಡದಾರರಿಗೆ ಅಕ್ಕಿ ಬದಲು ಆಹಾರ ಕಿಟ್! ಇಲ್ಲಿದೆ ಸಂಪೂರ್ಣ ವಿವರ!
ಸೇರಿದ ಜನರ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು(Vokkaliga Nigama arji) ಆಹ್ವಾನಿಸಲಾಗಿದೆ.
Vokkaliga Nigama Yojanegalu-ಯೋಜನೆಗಳು ಮತ್ತು ಸೌಲಭ್ಯಗಳು:
1) ಸ್ವಯಂ ಉದ್ಯೋಗ ನೇರ ಸಾಲ ಯೋಜನೆ/Sva udyoga nera sala:
ಸ್ವಯಂ ಉದ್ಯೋಗ ಕೈಗೊಳ್ಳಲು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳ ಹಾಗೂ ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯಲ್ಲಿರಬೇಕು ಹಾಗೂ ಅರ್ಜಿದಾರರ ವಯಸ್ಸು 18-55 ವರ್ಷದೊಳಗಿರಬೇಕು. ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ನಿಗಮದಿಂದ ಒದಗಿಸಲಾಗುವುದು.
ಇದನ್ನೂ ಓದಿ: Navodaya Online Application-ನವೋದಯ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ!
ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.30 ರಷ್ಟು ಗರಿಷ್ಟ ರೂ.30,000/-ಗಳ ಸಹಾಯಧನ ಉಳಿಕೆ ಶೇ.70ರಷ್ಟು ರೂ.1,70,000/-ಗಳನ್ನು ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ. ರೂ.1.00 ಲಕ್ಷಕ್ಕಿಂತ ಹೆಚ್ಚಿನ ಸಾಲದ ಭದ್ರತೆಗೆ ಸಾಲದ ಮೊತ್ತದಷ್ಟು ಮೌಲ್ಯವಿರುವ ಅರ್ಜಿದಾರರು / ಜಾಮೀನುದಾರರ ಸಿರಾಸ್ಥಿಯನ್ನು ನಿಗಮದ ಹೆಸರಿಗೆ ಆಧಾರ ಮಾಡಬೇಕು.
2) ಗಂಗಾ ಕಲ್ಯಾಣ ನೀರಾವರಿ ಯೋಜನೆ/Ganga Kalyana:
ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ವಾರ್ಷಿಕ ಆದಾಯ ರೂ.98,000/- ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆ ಘಟಕ ವೆಚ್ಚ ರೂ.4.75 ಲಕ್ಷಗಳಲ್ಲಿ ರೂ.4.25 ಲಕ್ಷಗಳ ಸಹಾಯಧನ ಇದರಲ್ಲಿ ರೂ.75,000/-ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ.4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಇದನ್ನೂ ಓದಿ: Ganga Kalyana-ಜಲಶಕ್ತಿ ಯೋಜನೆಯಡಿ ಬೋರ್ವೆಲ್ ಕೊರೆಸಲು ₹2.75 ಲಕ್ಷ ಸಹಾಯಧನಕ್ಕೆ ಅರ್ಜಿ!
ಉಳಿಕೆ ಜಿಲ್ಲೆಗಳಿಗೆ ಘಟಕ ವೆಚ್ಚ ರೂ.3.75 ಲಕ್ಷ ಇದರಲ್ಲಿ ಸಹಾಯಧನ ರೂ.3.25 ಲಕ್ಷ ಸಾಲ ರೂ.50,000/- ಗಳ ಸಾಲವನ್ನು ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಸಹಾಯಧನ ಮೊತ್ತದಲ್ಲಿ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು.
ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಟ 01 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಟ 02 ಎಕರೆ ಜಮೀನು ಇರಬೇಕು.
ತೆರೆದ ಬಾವಿ: ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.
ಇದನ್ನೂ ಓದಿ: Health Insurance-ಇನ್ಮುಂದೆ ಈ ಯೋಜನೆಯಡಿ ಸಿಗಲಿದೆ ₹5 ಲಕ್ಷ ಉಚಿತ ಚಿಕಿತ್ಸಾ ಸೌಲಭ್ಯ!
3) ಸ್ವಾವಲಂಬಿ ಸಾರಥಿ ಯೋಜನೆ/Swavalambi sarati:
ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳ ಹಾಗೂ ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯಲ್ಲಿರಬೇಕು ಹಾಗೂ ಅರ್ಜಿದಾರರ ವಯಸ್ಸು 21-45 ವರ್ಷದೊಳಗಿರುವ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಗರಿಷ್ಟ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.
4) ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ):
ಸ್ವಯಂ ಉದ್ಯೋಗ ಮಾಡಲು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳ ಹಾಗೂ ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯಲ್ಲಿರಬೇಕು ಹಾಗೂ ಅರ್ಜಿದಾರರ ವಯಸ್ಸು 18-55 ವರ್ಷದೊಳಗಿದ್ದು, ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿನ ಶೇ.20 ರಷ್ಟು ಗರಿಷ್ಠ ರೂ.1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
ಇದನ್ನೂ ಓದಿ: Cow Mat Subsidy-ಪಶುಪಾಲನೆ ಇಲಾಖೆಯಿಂದ 90% ಸಬ್ಸಿಡಿಯಲ್ಲಿ ಕೌ ಮ್ಯಾಟ್!

ಇದನ್ನೂ ಓದಿ: PM Kisan Farmer List-ಪಿಎಂ ಕಿಸಾನ್ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!
5) ಶೈಕ್ಷಣಿಕ ಸಾಲ ಯೋಜನೆ/Education Loan:
ಶೈಕ್ಷಣಿಕ ಸಾಲ ಯೋಜನೆ (Fresh Students): ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ಸಿಇಟಿ / ನೀಟ್ ಮೂಲಕ ಪ್ರವೇಶ ಪಡೆದು ವೃತ್ತಿಪರ ಕೋರ್ಸುಗಳಾದ ಇಂಜಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸುಗಳಲ್ಲಿನ ವ್ಯಾಸಂಗಕ್ಕಾಗಿ ವಾರ್ಷಿಕ ರೂ.1.00 ಲಕ್ಷಗಳಂತೆ ಕೋರ್ಸಗಳ ಅವಧಿಗೆ ಗರಿಷ್ಠ 4.00 ಲಕ್ಷಗಳಿಂದ ರೂ. 5.00 ಲಕ್ಷಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
6) ಶೈಕ್ಷಣಿಕ ಸಾಲ ಯೋಜನೆ (Renewals): 2022-23ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿಗೆ 4ನೇ ಕಂತಿನ ನವೀಕರಣ ಸಾಲ
ಮಂಜೂರು ಮಾಡಲು 4ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೂರನೇ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು. 2023-24 ನೇ ಸಾಲಿನಲ್ಲಿ ಸಾಲ ಪಡೆದು 2025-26ನೇ ಸಾಲಿನ 3ನೇ ಕಂತಿನ ಸಾಲಕ್ಕೆ 3ನೇ ವರ್ಷದ ವ್ಯಾಸಂಗ ದೃಢೀಕರಣ ಹಾಗೂ ಎರಡನೇ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು. 2024-25 ನೇ ಸಾಲಿನಲ್ಲಿ ಸಾಲ ಪಡೆದು 2025-26ನೇ ಸಾಲಿನ 2ನೇ ಕಂತಿನ ಸಾಲಕ್ಕೆ 2ನೇ ವರ್ಷದ ವ್ಯಾಸಂಗ ದೃಢೀಕರಣ ಹಾಗೂ ಮೊದಲನೇ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ಇದನ್ನೂ ಓದಿ: Education Loan-ಶೇ. 2ರ ಬಡ್ಡಿದರಲ್ಲಿ 1.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ ಆಹ್ವಾನ!
7) ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (Fresh Students):
ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್, ಪಿಹೆಚ್ ಡಿ, ಮಾಸ್ಟರ್ ಡಿಗ್ರೀ ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ.25.00 ಲಕ್ಷದಿಂದ ಕೋರ್ಸಿನ ಅವಧಿಗೆ ಗರಿಷ್ಠ ರೂ.50.00 ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಸಾಲದ ಭದ್ರತೆಗೆ ಸ್ಥಿರ ಆಸ್ತಿಯನ್ನು ನಿಗಮದ ಹೆಸರಿಗೆ ಆಧಾರ ಮಾಡಬೇಕು.
Last Date For Application-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 02 ಜುಲೈ 2025
Online Apply Method-ಅರ್ಜಿ ಸಲ್ಲಿಸುವ ವಿಧಾನ:
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನ ಗ್ರಾಮಒನ್/ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: Nursing scholarship-ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!
ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-29904350, 29904268 ಅನ್ನು ಸಂಪರ್ಕಿಸುವುದು ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯವರನ್ನು ಸಂಪರ್ಕಿಸುವುದು.
Online Application Link- ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now
ವಿಶೇಷ ಸೂಚನೆ:
2023-24ನೇ ಸಾಲಿನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು 2024-25ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ. ಕಳೆದ ಸಾಲಿನ ಅರ್ಜಿಯನ್ನೆ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.
ಇದನ್ನೂ ಓದಿ: IDFC Bank Scholarship-ಐಡಿಎಫ್ಸಿ ಬ್ಯಾಂಕ್ ನಿಂದ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!
For More Information-ಹೆಚ್ಚಿನ ಮಾಹಿತಿಗಾಗಿ:
ಕಚೇರಿ ವಿಳಾಸ-ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ
5ನೇ ಮಹಡಿ, ವಿಶ್ವೇಶ್ವರಯ್ಯ ದೊಡ್ಡ ಗೋಪುರ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಬೆಂಗಳೂರು 560001
ಸಹಾಯವಾಣಿ: 080-29904350, 29904268
Vokkaliga Nigama Website-ನಿಗಮದ ಅಧಿಕೃತ ಜಾಲತಾಣ- Click Here