ಕಾರ್ಮಿಕ ಇಲಾಖೆಯ ಅಡಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಡಿಯಲ್ಲಿ(Karmika Ilake) ಕಾರ್ಮಿಕ ಕಾರ್ಡ ಅನ್ನು ಹೊಂದಿರುವವರು ಸರ್ಕಾರದ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ಕಾರ್ಮಿಕ ಕಾರ್ಡ್ ಅಥವಾ ಲೇಬರ್ ಕಾರ್ಡ್ ಇದು ಅಸಂಘಟಿತ ವಲಯದ ಕಾರ್ಮಿಕರಿಗೆ(Karmika card benefits)ಸರ್ಕಾರ ನೀಡುವ ಗುರುತಿನ ಚೀಟಿಯಾಗಿದ್ದು, ಇದು ಕಾರ್ಮಿಕರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಕಲ್ಯಾಣ ಸೌಲಭ್ಯಗಳನ್ನು ಪಡೆಯಲು ಸಹಾಯಕಾರಿಯಗಿದೆ.
ಇದನ್ನೂ ಓದಿ: Mysore Dasara-2025: ಸರ್ಕಾರದಿಂದ ಈ ಬಾರಿಯ ಮೈಸೂರು ದಸರಾ ಆಚರಣೆಗೆ ಕುರಿತು ಮಹತ್ವದ ಮಾಹಿತಿ ಪ್ರಕಟ!
ಪ್ರಸ್ತುತ ಈ ಅಂಕಣದಲ್ಲಿ ಕಾರ್ಮಿಕ ಕಾರ್ಡ ಅನ್ನು ಪಡೆಯುವ ವಿಧಾನ ಹೇಗೆ? ವಿವಿಧ ಮಂಡಳಿಗಳ ವಿವರಗಳು? ಕಾರ್ಮಿಕ ಕಾರ್ಡ ಅನ್ನು ಪಡೆಯಲು ಆರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅದಕ್ಕೆ ಸಂಬದಿಸಿದ ಅಗತ್ಯ ದಾಖಲಾತಿಗಳಾವುವು? ಯಾವೆಲ್ಲ ಯೋಜನೆಗಳ ಸೌಲಭ್ಯವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Where To Apply-ಕಾರ್ಮಿಕ ಕಾರ್ಡ ಅನ್ನು ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಕಾರ್ಮಿಕ ಇಲಾಖೆ ಯೋಜನೆಯ ಅಡಿಯಲ್ಲಿ ಕಾರ್ಮಿಕ ಕಾರ್ಡ ಅನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಬೇಕಾದ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದಲ್ಲಿರುವ ಗ್ರಾಮ ಒನ್/ಕರ್ನಾಟಕ ಒನ್/CS ಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಅಥವಾ ನಿಮ್ಮ ತಾಲೂಕಿನ ಕಾರ್ಮಿಕ ಇಲಾಖೆಯ ಘಟಕವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಇದನ್ನೂ ಓದಿ: Crop Insurance-ವಿವಿಧ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!
Documents-ಕಾರ್ಮಿಕ ಕಾರ್ಡ ಪಡೆಯಲು ಅರ್ಜಿಯನ್ನು ಸಲ್ಲಿಸಲು ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ್/Aadhar card
- ಕೆಲಸ ಮಾಡುತ್ತಿರುವ ಬಗ್ಗೆ ದೃಡೀಕರಣ ಪತ್ರ/Job Confirmation letter
- ಬ್ಯಾಂಕ್ ಪಾಸ್ ಬುಕ್/Bank Passbook
- ಜಾತಿ ಪ್ರಮಾಣ ಪತ್ರ/Cast Certificate
- ಆದಾಯ ಪ್ರಮಾಣ ಪತ್ರ/Income Certificate
- ಪೋಟೋ/Photocopy
- ಮೊಬೈಲ್ ನಂಬರ್/Mobile number
ಇದನ್ನೂ ಓದಿ: Free Computer Training-ಕೆನರಾ ಬ್ಯಾಂಕ್ನಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ!
Labour Department Schems- ನೀವೆನಾದರು ಕಾರ್ಮಿಕ ಕಾರ್ಡ ಹೊಂದಿದ್ದರೆ ಯಾವ ಸೌಲಭ್ಯ ಪಡೆಯಬಹುದು:
ಈ ಕೆಳಗೆ ತಿಳಿಸಿತುವ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ Apply Now ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.
A) ಕುಟು೦ಬ ಪಿಂಚಣಿ ಸೌಲಭ್ಯ ಯೋಜನೆ:
ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ರೂ 2000 ಪಿಂಚಣಿಯನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.
B) ದುರ್ಬಲತೆ ಪಿಂಚಣಿ ಯೋಜನೆ:
ಕಾರ್ಮಿಕರು ಕೆಲಸದ ಸಮಯದಲ್ಲಿ ಆದ ಅಪಘಾತದಿಂದ ಅಥವಾ ಯಾವುದಾದರೂ ಖಾಯಿಲೆಯಿಂದ ದುರ್ಬಲತೆಗೆ ಒಳಗಾದಾಗ ಸರ್ಕಾರದ ಅಧಿಸೂಚನೆಯಂತೆ ರೂ.2000/-ಗಳನ್ನು ದುರ್ಬಲತೆ ಪಿಂಚಣಿಯನ್ನಾಗಿ ಹಣವನ್ನು ಮಂಜೂರು ಮಾಡಲಾಗುತ್ತದೆ.
ಇದನ್ನೂ ಓದಿ: BMTC Package Tour-ಬಿಎಂಟಿಸಿಯಿಂದ ಅತೀ ಕಡಿಮೆ ಬೆಲೆಯಲ್ಲಿ ಟೂರ್ ಪ್ಯಾಕೇಜ್!

ಇದನ್ನೂ ಓದಿ: Vokkaliga Nigama-ಒಕ್ಕಳಿಗ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಸೇರಿ ಒಟ್ಟು 7 ಯೋಜನೆಗೆ ಅರ್ಜಿ ಆಹ್ವಾನ!
C) ಹೆರಿಗೆ ವೆಚ್ಚಕ್ಕೆ ಸಹಾಯಧನ ಯೋಜನೆ:
ನೋಂದಾಯಿತ ಮಹಿಳಾ ಕಾರ್ಮಿಕರಿಂದ ಅರ್ಜಿಯನ್ನು ಪಡೆದು ಆಕೆಯ ಗಂಡು/ಹೆಣ್ಣು ಮಗುವಿನ ಜನನಕ್ಕೆ ಹೆರಿಗೆ ವೆಚ್ಚಕ್ಕೆ ರೂ.50,000/- ಸಹಾಯಧನವನ್ನು ಒದಗಿಸಲಾಗುತ್ತದೆ.
D) ಅಂತ್ಯಕ್ರಿಯೆ ವೆಚ್ಚ ಯೋಜನೆ:
ಕಾರ್ಮಿಕ ಕಾರ್ಡ ಅನ್ನು ಹೊಂದಿರುವ ನೋಂದಾಯಿತ ಕಟ್ಟಡ ಕಾರ್ಮಿಕನ ಅಂತ್ಯಕ್ರಿಯೆ ವೆಚ್ಚವನ್ನು ಭರಿಸಲು ಈ ಯೋಜನೆಯಡಿ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.
E) ಶೈಕ್ಷಣಿಕ ಸಹಾಯಧನ ಯೋಜನೆ:
ಶೈಕ್ಷಣಿಕ ಸಹಾಯಧನ ಯೋಜನೆಯಡಿ ಪ್ರೌಢಶಾಲೆ. (8 ರಿಂದ 10ನೇ ತರಗತಿವರೆಗೆ) ರೂ.6.000/-, ಪಿಯುಸಿ / ಡಿಪ್ಲೊಮಾ / ಐಟಿಐ /ಟಿಸಿಹೆಜ್ ಶಿಕ್ಷಣಕ್ಕಾಗಿ ರೂ.8.000/-, ಪದವಿ ಶಿಕ್ಷಣಕ್ಕಾಗಿ ರೂ.10.000/-, ಸ್ನಾತಕೋತ್ತರ ಶಿಕ್ಷಣಕ್ಕಾಗಿ ರೂ.12.000/-, ಇಂಜಿನೀಯರಿಂಗ್/ವೈದ್ಯಕೀಯ ಶಿಕ್ಷಣಕ್ಕಾಗಿ ರೂ.20,000/-ಗಳ ಪ್ರೋತ್ಸಾಹ ಸಹಾಯಧನ ನೀಡಲಾಗುವುದು. (ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.50 ಹಾಗೂ ಪ.ಜಾತಿ. /ಪ. ಪಂಗಡದ ವಿದ್ಯಾರ್ಥಿಗಳು ಶೇ. 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು, ವಿದ್ಯಾರ್ಥಿಗಳಿಗೆ (ಮಕ್ಕಳಿಗೆ) ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ.
ಇದನ್ನೂ ಓದಿ: Ration card-ರೇಷನ್ ಕಾರ್ಡದಾರರಿಗೆ ಅಕ್ಕಿ ಬದಲು ಆಹಾರ ಕಿಟ್! ಇಲ್ಲಿದೆ ಸಂಪೂರ್ಣ ವಿವರ!
F) ಪಿಂಚಣಿ ಸೌಲಭ್ಯ ಯೋಜನೆ:
ಈ ಯೋಜನೆಯಡಿ ಪ್ರತಿ ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕ ಫಲಾನುಭವಿಯು 60 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು. ನೋಂದಾಯಿತ ಕಟ್ಟಡ ಕಾರ್ಮಿಕ 60 ವರ್ಷ ವಯಸ್ಸು ಪೂರ್ಣಗೊಳ್ಳುವ ಪೂರ್ವದಲ್ಲಿ ಕನಿಷ್ಠ 03 ವರ್ಷಗಳು ನಿರಂತರವಾಗಿ ಮಂಡಳಿಯ ಫಲಾನುಭವಿಯಾಗಿ ಇದ್ದರೆ ಮಾಸಿಕ ರೂ 3000/-ಗಳನ್ನು ಪಿಂಚಣಿಯನ್ನು ಪಡೆಯಬಹುದು.
G) ವೈದ್ಯಕೀಯ ಸಹಾಯಧನ ಯೋಜನೆ:
ವೈದ್ಯಕೀಯ ಸಹಾಯಧನ ಯೋಜನೆಯಡಿ ನೋಂದಾಯಿತ ಕಾರ್ಮಿಕರಿಗೆ ಗರಿಷ್ಠ ರೂ.2 ಲಕ್ಷಗಳವರೆಗೆ ಈ ಯೋಜನೆಯಡಿ ವೈದ್ಯಕೀಯ ವೆಚ್ಚವನ್ನು ಭರಿಸಲು ಅವಕಾಶವಿರುತ್ತದೆ.
H) ಅಪಘಾತ ಪರಿಹಾರಧನ ಯೋಜನೆ:
ಈ ಯೋಜನೆಯ ಮೂಲಕ ನೋಂದಾಯಿತ ಕಟ್ಟಡ ಕಾರ್ಮಿಕನಿಗೆ ಕೆಲಸ ಮಾಡುವ ಸಮಯದಲ್ಲಿ ಅಪಘಾತವಾದಾಗ, ಅವನಿಗೆ / ಅವಳಿಗೆ ಕಾರ್ಮಿಕರ ನಷ್ಠ ಪರಿಹಾರ ಕಾಯ್ದೆ, 1923 ರ ಪ್ರಾವಧಾನಗಳಡಿ ಸಂಸ್ಥೆಯ ನಿಯೋಜಕನು ಅಪಘಾತ ಪರಿಹಾರವನ್ನು ನೀಡಬೇಕಾಗುತ್ತದೆ. ಜೊತೆಗೆ ಸರ್ಕಾರದ ಅಧಿಸೂಚನೆ ಸಂಖ್ಯೆ ಎಲ್ ಡಿ 106 ಎಲ್ ಇಟಿ 2019 ಬೆಂಗಳೂರು ದಿನಾಂಕ: 01-10-2019 ರಂತೆ ಮಂಡಳಿಯಿಂದ 2-ಲಕ್ಷ ರೂಗಳ ಪರಿಹಾರ ಸಹಾಯಧನ ನೀಡಲಾಗುತ್ತಿದೆ.
ಇದನ್ನೂ ಓದಿ: Ganga Kalyana-ಜಲಶಕ್ತಿ ಯೋಜನೆಯಡಿ ಬೋರ್ವೆಲ್ ಕೊರೆಸಲು ₹2.75 ಲಕ್ಷ ಸಹಾಯಧನಕ್ಕೆ ಅರ್ಜಿ!
I) ಮದುವೆ ಸಹಾಯಧನ ಯೋಜನೆ:
ನೋಂದಾಯಿತ ಕಾರ್ಮಿಕರು ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಮೊದಲನೆ ಮದುವೆಗೆ ಅಥವಾ ಅವನ / ಅವಳ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.60,000/- ಅನ್ನು ಪಡೆಯಲು ಅವಕಾಶವಿರುತ್ತದೆ.
J) ತಾಯಿ ಮಗು ಸಹಾಯಧನ ಯೋಜನೆ:
ತಾಯಿ ಮಗು ಸಹಾಯಧನ ಯೋಜನೆಯಡಿ ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕಳು ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ.
ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರಿಗೆ ವಾರ್ಷಿಕ 6000/- ರೂ ಗಳ ಮೊತ್ತವನ್ನು (ಮಾಸಿಕ 500 ರೂಪಾಯಿಗಳು) ಮಂಜೂರು ಮಾಡಲಾಗುತ್ತದೆ.
ಇದನ್ನೂ ಓದಿ: Navodaya Online Application-ನವೋದಯ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ!
How To Apply-ಅರ್ಜಿ ಸಲ್ಲಿಸುವ ವಿಧಾನ:
Step-1: ಮೊದಲಿಗೆ ಇಲ್ಲಿ ಕ್ಲಿಕ್ Click Here ಮಾಡಿ ಅಧಿಕೃತ ಕಾರ್ಮಿಕ ಮಂಡಳಿಯ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಬಳಿಕ ಈ ಪೇಜ್ ನಲ್ಲಿ ಒಂದು ಮಂಡಳಿಯನ್ನು ಆಯ್ಕೆ ಮಾಡಿಕೊಂಡು ಮುಂದಿನ ಪುಟವನ್ನು ಭೇಟಿ ಮಾಡಿ ಒಂದು ಯೋಜನೆಯನ್ನು ಆಯ್ಕೆ ಮಾಡಿಕೊಂಡು “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: Health Insurance-ಇನ್ಮುಂದೆ ಈ ಯೋಜನೆಯಡಿ ಸಿಗಲಿದೆ ₹5 ಲಕ್ಷ ಉಚಿತ ಚಿಕಿತ್ಸಾ ಸೌಲಭ್ಯ!
Kamrika Ilake Helpline Number-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ-155214