ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯ ಅಡಿಯಲ್ಲಿ(Ambedkar Nigam subsidy) ಅರ್ಹ ಅಭ್ಯರ್ಥಿಗಳಿಂದ ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ಪ್ರಾರಂಭಿಸಲು ಅಂಬೇಡ್ಕರ್ ನಿಗಮದಿಂದ ₹50,000 ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಂತ ಉದ್ದಿಮೆಯನ್ನು ಆರಂಭಿಸಲು ಯೋಜನೆಯನ್ನು ಹಾಕಿಕೊಂಡಿರುವವರು(Government subsidy shop)ಆರಂಭಿಕ ವೆಚ್ಚವನ್ನು ಭರಿಸಲು ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅಂಬೇಡ್ಕರ್ ನಿಗಮದಿಂದ ಆರ್ಥಿಕ ನೆರವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: Sheep farming Subsidy-ಕುರಿ ಸಾಕಾಣಿಕೆಗೆ ಶೇ 50% ಸಬ್ಸಿಡಿ ಪಡೆಯಲು ಅವಕಾಶ!
ಪ್ರಸ್ತುತ ಈ ಅಂಕಣದಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅನುಸರಿಸ ಬೇಕಾದ ಕ್ರಮಗಳಾವುವು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Subsidy Amount-ಯೋಜನೆಯ ಸಬ್ಸಿಡಿಯ ವಿವರ ಈ ಕೆಳಗಿನಂತಿದೆ:
ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ಹಣ್ಣು,ತರಕಾರಿ, ಮೀನು, ಮಾಂಸ ಮಾರಾಟ, ಹಸು/ಕುರಿ/ಹಂದಿ/ಮೊಲ ಸಾಕಾಣಿಕೆ ಇತ್ಯಾದಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ ರೂ.1.00ಲಕ್ಷಗಳಾಗಿದ್ದು, ಈ ಪೈಕಿ ರೂ.50,000/- ಸಹಾಯಧನ ಹಾಗೂ ರೂ.50,000/- ಸಾಲದ ರೂಪದಲ್ಲಿ ಆರ್ಥಿಕ ನೆರವನ್ನು ಕಲ್ಪಿಸಲಾಗುತ್ತಿದೆ. ಸಾಲದ ಮೊತ್ತವನ್ನು 36 ಸಮಾನ ಕಂತುಗಳಲ್ಲಿ ನಿಗಮಕ್ಕೆ ಶೇ.4ರ ಬಡ್ಡಿದರದೊಂದಿಗೆ ಮರುಪಾವತಿಸಬೇಕಾಗಿರುತ್ತದೆ.
ಇದನ್ನೂ ಓದಿ: Corteva Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್ಶಿಪ್ ನಡಿ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2025
ಯಾವ ಯಾವ ನಿಗಮಗಳ ಅಡಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ?
ಅಂಬೇಡ್ಕರ್ ಅಭಿವೃದ್ಧಿ ನಿಗಮ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಕರ್ನಾಟಕ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ
ಇದನ್ನೂ ಓದಿ: Car Subsidy Application-ವಾಹನ/ಟ್ಯಾಕ್ಸಿ ಖರೀದಿಗೆ ರೂ 4.00 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Who Can Apply-ಅರ್ಜಿ ಸಲ್ಲಿಸಲು ಯಾರು ಅರ್ಹರು?
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
ಅಭ್ಯರ್ಥಿಯು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರಬೇಕು
ಅರ್ಜಿದಾರರ ವಯಸ್ಸು 21 ರಿಂದ 60 ವರ್ಷದೊಳಗಿರಬೇಕು
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು, ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು
ಅರ್ಜಿದಾರರ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಭಾಗಕ್ಕೆ ರೂ 1.5 ಲಕ್ಷ ಹಾಗೂ ನಗರ ಪ್ರದೇಶದಲ್ಲಿರುವವರಿಗೆ ರೂ 2.00 ಲಕ್ಷ ಮೀರಿರಬಾರದು
ವಿಕಲಚೇತನರಾಗಿದ್ದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು.
ಇದನ್ನೂ ಓದಿ: BSF constable requirement 2025-SSLC ಅಥವಾ ITI ಪಾಸಾದವರು ಕೂಡ ಅರ್ಜಿ ಹಾಕಬಹುದು!
Documents Required-ಅಗತ್ಯವಿರುವ ದಾಖಲಾತಿಗಳಾವುವು?
ಅರ್ಜಿದಾರರ ಆಧಾರ್ ಕಾರ್ಡ್
ಅರ್ಜಿದಾರರ ಆಹಾರ ಪಡಿತರ ಚೀಟಿ
ಅರ್ಜಿದಾರರ ಚುನಾವಣಾ ಗುರುತಿನ ಚೀಟಿ
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿಲ್ಲವೆಂದು ಎಲ್ಲಾ ಅರ್ಜಿದಾರರ ಸ್ವಯಂ ಘೋಷಣೆ
ಅರ್ಜಿದಾರರ ಇತ್ತೀಚಿನ ಭಾವಚಿತ್ರ
ವಿಕಲಚೇತನರಾಗಿದ್ದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು
ಯೋಜನಾ ವರದಿ / ದರಪಟ್ಟಿ
ಇದನ್ನೂ ಓದಿ: Scholorship Application-SSLC-PUC ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಈಗಲೇ ಅರ್ಜಿ ಹಾಕಿ!
How To Apply- ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸುವ ವಿಧಾನಗಳಾವುವು?
ಅಂಬೇಡ್ಕರ್ ನಿಗಮದಿಂದ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಅರ್ಜಿರಾರರ ಅಭ್ಯರ್ಥಿಯು ಮೊದಲಿಗೆ ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ ಅರಿವು ಸೇವಾ ಸಿಂಧು ವೆಬ್ಸೈಟ್ ಗೆ ಭೇಟಿ ಮಾಡಬೇಕು.
ಇದನ್ನೂ ಓದಿ: Cattle Subsidy scheme-ಹಸು-ಎಮ್ಮೆ ಖರೀದಿ ಮಾಡಲು ಶೇ 50 ರಷ್ಟು ಸಹಾಯಧನಕ್ಕೆ ಅರ್ಜಿ!

ಇದನ್ನೂ ಓದಿ: Police Constable Training-ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
Step-2: ಬಳಿಕ ಕೆಳಗೆ ಕಾಣುವ “ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ” ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ “Seva Sindhu” ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಂತರ ಇಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ ಕ್ಯಾಪ್ಚ್ ಕೋಡ್ ಹಾಕಿ “Submit” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.
Step-3: ಅಭ್ಯರ್ಥಿಯು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವ ಅಭ್ಯರ್ಥಿಗಳು “Register Here” ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಳ್ಳಬೇಕು.
Step-4: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅಗತ್ಯ ವಿವರವನ್ನು ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: Land Ownership Scheme-ಭೂಮಿ ಖರೀದಿಸಲು 25 ಲಕ್ಷ ರೂ ಸಹಾಯಧನ! ಇಲ್ಲಿದೆ ಸಂಪೂರ್ಣ ಮಾಹಿತಿ!
More Information-ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read More