ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳ ವತಿಯಿಂದ ಸ್ವಾವಲಂಬಿ ಸಾರಥಿ (swavalambi sarati) ಯೋಜನೆಯ ಅಡಿಯಲ್ಲಿ ₹3.0 ಲಕ್ಷ ಸಬ್ಸಿಡಿಯಲ್ಲಿ ಕಾರು ಖರೀದಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ(Car Subsidy Scheme)ಸ್ವಾವಲಂಬಿ ಸಾರಥಿ ಯೋಜನೆಯಡಿ ಅಭ್ಯರ್ಥಿಗಳು ಟ್ಯಾಕ್ಸಿ /ಹಳದಿ ಬೋರ್ಡ್ ವಾಹನವನ್ನು ಖರೀದಿ ಮಾಡಿ ಸ್ವಂತ ಉದ್ಯೋಗವನ್ನು ನೆಡೆಸುವ ಉದ್ದೇಶಕ್ಕಾಗಿ ಸಬ್ಸಿಡಿಯಲ್ಲಿ ವಾಹನವನ್ನು ಖರೀದಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಒದಗಿಸಲಾಗಿದೆ.
ಇದನ್ನೂ ಓದಿ: MSP Price list-2025: ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೇಂದ್ರದಿಂದ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!
ಪ್ರಸ್ತುತ ಈ ಲೇಖನದಲ್ಲಿ ಸಬ್ಸಿಡಿಯಲ್ಲಿ ಕಾರು ಖರೀದಿಗೆ ತಮ್ಮ ಮೊಬೈಲ್ ನಲ್ಲೆ ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Car subsidy- ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನ ನೀಡಲಾಗುತ್ತದೆ?
ಈ ಯೋಜನೆಯ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ವಾಹನವನ್ನು ಖರೀದಿ ಮಾಡಲು ಶೇ.50% ಅಂದರೆ ಗರಿಷ್ಟ ₹3.00 ಲಕ್ಷಗಳವರೆಗೆ ಸಬ್ಸಿಡಿಯನ್ನು ಬ್ಯಾಂಕ್ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಸಾಲವನ್ನು ತೆಗೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
Imp Dates For Online Application- ಅರ್ಜಿಯನ್ನು ಸಲ್ಲಿಸಲು ಅಗತ್ಯ ಪ್ರಮುಖ ದಿನಾಂಕಗಳು:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ- ಪ್ರಸ್ತುತ ಈಗಾಗಲೆ ಅರ್ಜಿ ಸಲ್ಲಿಕೆ ಹಂತವು ಜಾಲ್ತಿಯಲ್ಲಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 31-07-2025
ಇದನ್ನೂ ಓದಿ: Rain Forecast-ರಾಜ್ಯದಲ್ಲಿ ಈ ದಿನದಿಂದ ಮತ್ತೆ ಮುಂಗಾರು ಚುರುಕು ಸಾಧ್ಯತೆ!
Car subsidy- ಈ ಯೋಜನೆಯ ಅಡಿಯಲ್ಲಿ ಯಾವೆಲ್ಲ ವಾಹನಗಳನ್ನು ಖರೀದಿ ಮಾಡಲು ಅವಕಾಶವಿರುತ್ತದೆ?
ಟ್ಯಾಕ್ಸಿ
ಆಟೋ
ನಾಲ್ಕು ಚಕ್ರಗಳ ವಾಹನ
ಸರಕು ಸಾಗಣಿಕೆ ವಾಹನ

Who Can Apply- ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಅಭ್ಯರ್ಥಿಯು ವೀರಶೈವ-ಲಿಂಗಾಯತ ವರ್ಗಕ್ಕೆ ಸೇರಿದವರಾಗಿರಬೇಕು.
- ಅಭ್ಯರ್ಥಿಯ ವಯಸ್ಸು 21 ವರ್ಷದಿಂದ 45 ವರ್ಷ ಮೀರಿರಬಾರದು.
- ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಭಾಗದಲ್ಲಿ ರೂ 98,000/- ಮಿತಿಯಲ್ಲಿರಬೇಕು.
ಇದನ್ನೂ ಓದಿ: Free Tailoring Machine-ಉಚಿತ ಟೈಲರಿಂಗ್ ಯಂತ್ರ ಪಡೆಯಲು ಅರ್ಜಿ ಆಹ್ವಾನ!
- ಅಭ್ಯರ್ಥಿಯು ನಗರ ಪ್ರದೇಶದಲ್ಲಿರುವವರಾದರೆ ರೂ 1,20,000/- ಒಳಗಿರಬೇಕು.
- ಅರ್ಜಿದಾರ ಅಭ್ಯರ್ಥಿಯು ಕುಟುಂಬದ ಸದಸ್ಯರು ರಾಜ್ಯ ಮತ್ತು ಕೇಂದ್ರ ಸರಕಾರಿದ ನೌಕರಿಯಲ್ಲಿರಬಾರದು.
- ಅರ್ಜಿದಾರರು ಡ್ರೈವಿಂಗ್ ಲೆಸೈನ್ಸ್ ಅನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
What are the Documents- ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ/Aadhar card
- ಬ್ಯಾಂಕ್ ಪಾಸ್ ಬುಕ್/Bank passbook
- ಜಾತಿ ಪ್ರಮಾಣ ಪತ್ರ/Caste certificate
- ಆದಾಯ ಪ್ರಮಾಣ ಪತ್ರ/Income certificate
- ರೇಶನ್ ಕಾರ್ಡ ಪ್ರತಿ/Ration card
- ಡ್ರೈವಿಂಗ್ ಲೈಸೆನ್ಸ್/Driving licence
- ಮೊಬೈಲ್ ನಂಬರ್/Mobile number
- ಪೋಟೋ/Photocopy
ಇದನ್ನೂ ಓದಿ: Scholorship Application-ಮಿರೇ ಅಸೆಟ್ ಫೌಂಡೇಶನ್ ನಿಂದ ₹50,000 ಸ್ಕಾಲರ್ಶಿಪ್ ಪಡೆಯಲು ಅರ್ಜಿ!
How To Apply- ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸುವ ಹೇಗೆ?
ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ಪೋರ್ಟಲ್ ಅನ್ನು ಭೇಟಿ ಮಾಡಿ ತಮ್ಮ ಮೊಬೈಲ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.
Step-2: ನಂತರದಲ್ಲಿ ಈ ಪೋರ್ಟಲ್ ಗೆ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವವರು ಅದೇ ಪೇಜ್ ನಲ್ಲಿ ಕಾಣುವ “Register Here” ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ID ಯನ್ನು ಸಿದ್ದಪಡಿಸಿಕೊಳ್ಳಬೇಕು.
ಇದನ್ನೂ ಓದಿ: Ration Card List-ಪರಿಷ್ಕೃತ ಅನರ್ಹ ರೇಷನ್ ಕಾರ್ಡ್ದಾರರ ಪಟ್ಟಿ ಬಿಡುಗಡೆ!
Step-3: ನಂತರ ಅರ್ಜಿದಾರರ ID ಯನ್ನು ಹಾಕಿ ನಮೂದಿಸಿದ ಮೊಬೈಲ್ ನಂಬರ್ ಗೆ ಬಂದಿರುವ OTP ಅನ್ನು ನಮೂದಿಸಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಮಾಡಿದರೆ ಅರ್ಜಿ ಪ್ರಕ್ತಿಯೆಯು ತೆರೆದುಕೊಳ್ಳುತ್ತದೆ. ನಂತರ ಅಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.