ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ(Labour Insurance Scheme)ಕಾರ್ಮಿಕ ಇಲಾಖೆಯ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮೃತಪಟ್ಟ ನೋಂದಾಯಿತ ಫಲಾನುಭವಿಗಳಿಗೆ ಪರಿಧನವನ್ನು 8 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಪರಿಹಾರ ಮೊತ್ತವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ ಈ ನಿರ್ಧಾರವನ್ನು 2025 ರಲ್ಲಿ ಜಾರಿಗೆ ತಂದಿದ್ದು,(Worker Accident Benefit)ಈಗಾಗಲೇ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮರಣವಾದರೆ ನೀಡಲಾಗುತ್ತಿದ್ದ ₹5 ಲಕ್ಷ ಪರಿಹಾರ ಧನವನ್ನು ಈಗ ₹8 ಲಕ್ಷಕ್ಕೆ ಏರಿಸಲಾಗಿದ್ದು, ಇದು 60% ಏರಿಕೆಯನ್ನು ತೋರಿಸಿದ್ದು, ಇದು ಕಾರ್ಮಿಕರ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಳ್ಳವುದರ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ: Karnataka Weather-ಜು.27 ರವರೆಗೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ! ಇಲ್ಲಿದೆ ರಾಜ್ಯ ಮಳೆ ಮುನ್ಸೂಚನೆ!
ಪ್ರಸ್ತುತ ಈ ಯೋಜನೆಯ ಅಡಿಯಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸ್ಲಲಿಸಬೇಕು? ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Reasons for increasing this compensation-ಈ ಪರಿಹಾರ ಧನವನ್ನು ಏರಿಕೆ ಮಾಡಲು ಕಾರಣಗಳು?
ಕರ್ನಾಟಕದಲ್ಲಿ ಉದ್ಯೋಗ ಅವಕಾಶಗಳಲ್ಲಿ ಕಾರ್ಮಿಕ ನಿರ್ಮಾಣ ಕ್ಷೇತ್ರವು ಪ್ರಮುಖ ಆಯಾಮವಾಗಿದ್ದು, ಹಾಗೆಯೇ ತುಂಬಾ ಅಪಾಯಕರ ಕ್ಷೇತ್ರವೂ ಸಹ ಆಗಿದೆ. ಇತ್ತಿಚಿನ ದಿನಗಳಲ್ಲಿ ವರದಿಯ ಪ್ರಕಾರ ದಿನಕ್ಕೆ ಸರಾಸರಿ 38 ಮಂದಿ ಕಾರ್ಮಿಕರು ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 2023 ರ ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ILO) ವರದಿಯ ಪ್ರಕಾರ, ಭಾರತದ ನಿರ್ಮಾಣ ಕ್ಷೇತ್ರದಲ್ಲಿ ಸಾವಿನ ಪ್ರಮಾಣವು ಸರಾಸರಿಯಿಗಿಂತ 20% ಎತ್ತರದಲ್ಲಿದೆ. ಈ ಹಿನ್ನೆಲೆಯಲ್ಲಿ, KBOCWWB ಈ ಆದೇಶವನ್ನು ಜಾರಿಗೆ ತಂದಿದ್ದು, ಕಾರ್ಮಿಕರ ಕುಟುಂಬಗಳಿಗೆ ಹೆಚ್ಚಿನ ಆರ್ಥಿಕ ಬೆಂಬಲವನ್ನು ಒದಗಿಸುವ ಉದ್ದೇಶ ಈ ಯೋಜನೆಯದಾಗಿದೆ.
ಇದನ್ನೂ ಓದಿ: Bharti Airtel Scholarship-ಏರ್ಟೆಲ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇನ್ನೂ 11 ದಿನ ಬಾಕಿ!
“Shrameva Jayate” project-“ಶ್ರಮೇವ ಜಯತೇ” ಯೋಜನೆಯ ಸಮೀಕ್ಷೆ:
2014 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭ ಮಾಡಿರುವ “ಶ್ರಮೇವ ಜಯತೇ” ಎಂಬ ಯೋಜನೆಯನ್ನು ಜಾರಿಗೆ ತಂದಿರುತ್ತಾರೆ. ಈ ಶ್ರಮೇವ ಜಯತೇ ಯೋಜನೆಯಲ್ಲಿ ಕಾರ್ಮಿಕ ಕಾನೂನುಗಳಲ್ಲಿ ಸುಧಾರಣೆ ಹಾಗೂ ಕಾರ್ಮಿಕರ ಭದ್ರತೆಗಾಗಿ ಈ ಯೋಜನೆಯು ಗಮನಹರಿಸುತ್ತದೆ. ಆದರೆ, ಸುರಕ್ಷಾ ಮಾನದಂಡಗಳ ಕೊರತೆ ಮತ್ತು ಅಪಘಾತಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಈ ಹೆಚ್ಚಳವನ್ನು ಪ್ರತಿಕ್ರಿಯಾತ್ಮಕ ಕ್ರಮವಾಗಿ ಮಾಡಿರಬಹುದು ಎಂಬ ಚರ್ಚೆಯೂ ಇದೆ.
Purpose Of This Scheme-ಈ ಯೋಜನೆಯ ಉದ್ದೇಶವೇನು?
- ಕಾರ್ಮಿಕರು ಕೆಲಸದ ಸಮಯದಲ್ಲಿ ಅಪಘಾತಕ್ಕೆ ಒಳಗಾದರೆ ಅಥಚ ಸವನ್ನಪ್ಪಿದರೆ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಸಹಾಯ ಒದಗಿಸುವುದರ ಉದ್ದೇಶ.
- ಕಾರ್ಮಿಕರ ಕುಟುಂಬದ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಸ್ಥಿರತೆ ಒದಗಿಸುವುದು.
- ಕಾರ್ಮಿಕರು ಆಪತ್ತಿಗೊಳಗಾದ ಸಂದರ್ಭಗಳಲ್ಲಿ ಅವರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಭದ್ರತೆಯನ್ನು ಒದಗಿಸುವುದು.
- ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಿ, ಅವರ ಕಲ್ಯಾಣವನ್ನು ವೃದ್ಧಿಪಡಿಸುವುದು.
- ಕಾರ್ಮಿಕರ ಪರಿಹಾರ ಧನವನ್ನು ₹5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಕಾರ್ಮಿಕ ಕುಟುಂಬಗಳಿಗೆ ಹೆಚ್ಚಿನ ಸಹಾಯ ಮಾಡುವ ಉದ್ದೇಶ.
ಇದನ್ನೂ ಓದಿ: Aadhar Update-7 ವರ್ಷ ಮೀರಿದ ಮಕ್ಕಳಿಗೆ ಆಧಾರ್ ಕಾರ್ಡ ಬಯೋಮೆಟ್ರಿಕ್ ಕಡ್ಡಾಯ!
Who Can Apply-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
ಅಸಂಘಟಿತ ಕ್ಷೇತ್ರದ ನೋಂದಾಯಿತ ಕಾರ್ಮಿಕರು
ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕನಾಗಿರಬೇಕು
ಅಪಘಾತ, ಅನಾಹುತದಿಂದ ಮೃತಪಟ್ಟ ಕಾರ್ಮಿಕನ ಕುಟುಂಬ ಸದಸ್ಯರು
ಅಪಘಾತದಿಂದ ಶಾಶ್ವತ ಅಂಗವೈಕಲ್ಯ ಅಥವಾ ಗಾಯಗೊಂಡಿದ್ದರೆ, ತದನಂತರ ಸಿದ್ಧ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವರ್ಷಗಳ ಕಾಲ ಚಂದಾ ಪಾವತಿಸಿರುವ ನೋಂದಾಯಿತ ಕಾರ್ಮಿಕರು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: Free Hostel Application-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ!
Documents Required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ/Aadhar Card
- ರೇಶನ್ ಕಾರ್ಡ/Ration Card
- ನೋಂದಣಿ ಕಾರ್ಡ್ ಪ್ರತಿ/ Registration Certificate
- ವೈದ್ಯಕೀಯ ಪ್ರಮಾಣ ಪತ್ರ/Medical Certificate
- ಮರಣ ಪ್ರಮಾಣ ಪತ್ರ (ಮರಣವಾಗಿದ್ದರೆ)/Death Certificate
- ಬ್ಯಾಂಕ್ ಖಾತೆ ಪುಸ್ತಕ/Bank Passbook
- ಮೊಬೈಲ್ ನಂಬರ್/Mobile Number
ಇದನ್ನೂ ಓದಿ: PM Dhan Dhanya Yojana-ಕೇಂದ್ರದಿಂದ ಪಿಎಂ ಧನ್ ಧಾನ್ಯ ಕೃಷಿ ನೂತನ ಯೋಜನೆ ಜಾರಿ!
ಇದನ್ನೂ ಓದಿ: Banking Job-ಸರ್ಕಾರಿ ಬ್ಯಾಂಕ್ಗಳಲ್ಲಿ 6,215 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
Where To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಕಾರ್ಮಿಕ ಇಲಾಕೆಯ ಅಡಿಯಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳು ನಿಮ್ಮ ತಾಲ್ಲೂಕಿನಲ್ಲಿರುವ ಕರ್ನಾಟಕ ಕಾರ್ಮಿಕ ಇಲಾಖೆ ಅಥವಾ ಕಾರ್ಮಿಕರ ಕಲ್ಯಾಣ ಮಂಡಳಿಯ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಥವಾ ಅಧಿಕೃತ ಕರ್ನಾಟಕ ಕಾರ್ಮಿಕ ಇಲಾಖೆಯ ವೆಬ್ಸೈಟ್ ಭೇಟಿ ಮಾಡಿ ಆನ್ಲೈನ್ ಮೂಲಕವೂ ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ?
ಅರ್ಹ ಫಲಾನುಭವಿಗಳು ಕಾರ್ಮಿಕ ಮಂಡಳಿಯ ವಿವಿಧ ಸೌಲಭ್ಯವನ್ನು ಪಡೆಯಲು ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಮೊದಲಿಗೆ ಈ ಲಿಂಕ್ “Apply Now” ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಮಂಡಳಿಯ ವೆಬ್ಸೈಟ್ ಅನ್ನು ಭೇಟಿ ಮಾಡಿ.
Step-2: ಬಳಿಕ ಇಲ್ಲಿ ಕನ್ನಡ/English ಎರಡು ಆಯ್ಕೆಯಲ್ಲಿ ಒಂದನ್ನು ಸೆಲೆಕ್ಟ್ ಮಾಡಿಕೊಂಡು ಮಂಡಳಿಯ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ಯೋಜನೆವಾರು ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇವುಗಳಲ್ಲಿ ಒಂದರ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: Scholorship Application-NEET ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!
For More Information-ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ: Click Here
ಕಾರ್ಮಿಕ ಸಹಾಯವಾಣಿ: 155214