ಸರ್ಕಾರದಿಂದ ಈ ಬಾರಿಯ ಮೈಸೂರು ದಸರಾ(Mysore Dasara) ಆಚರಣೆಗೆ ಕುರಿತು ಸಭೆಯನ್ನು ನಡೆಸಿ ಮಹತ್ವದ ತಿರ್ಮಾನಗಳನ್ನು ಕೈಗೊಂಡು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ(CM Of Karnataka) ಅವರು ಇಂದು ನಾಡಹಬ್ಬ ಮೈಸೂರು(Mysore) ದಸರಾ-2025 ಆಚರಣೆ ಕುರಿತು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿ, ಈ ಬಾರಿಯ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಹಾಗೂ ಅಷ್ಟೇ ವ್ಯವಸ್ಥಿತವಾಗಿ ಆಯೋಜಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಹಲವು ಸಲಹೆ, ಸೂಚನೆಗಳನ್ನು ನೀಡಿದ್ದು ಈ ಕುರಿತು ವಾರ್ತಾ ಇಲಾಖೆಯಿಂದ ಅಧಿಕೃತವಾಗಿ ಹೊರಡಿಸಿರುವ ಪ್ರಕಟಣೆ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: Crop Insurance-ವಿವಿಧ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!
Mysore Dasara-2025: ನಾಡಹಬ್ಬ ಮೈಸೂರು ದಸರಾ-2025ಕ್ಕೆ ಡೇಟ್ ಪಿಕ್ಸ್:
ಸೆಪ್ಟೆಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10 ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Karnataka Cultural Festivals-ಸಭೆಯಲ್ಲಿ ತೆಗೆದುಕೊಂಡು ಪ್ರಮುಖ ನಿರ್ಣಯಗಳ ಪಟ್ಟಿ ಹೀಗಿದೆ:
ವಿಜೃಂಭಣೆ ಭರದಲ್ಲಿ ದಸರಾದ ಚಾರಿತ್ರಿಕ ಮಹತ್ವಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಲಹೆಯನ್ನು ನೀಡಲಾಗಿದೆ.
ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.
ಈ ಗಾರಿ ರಾಜ್ಯಾದ್ಯಂತ ಮಳೆ – ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.
ಇದನ್ನೂ ಓದಿ: Free Computer Training-ಕೆನರಾ ಬ್ಯಾಂಕ್ನಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ!
ಸೆಪ್ಟೆಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10 ದಿನಗಳ ಬದಲು 11 ದಿನಗಳ ಕಾಲ ನಡೆಯಲಿದೆ.
ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.

ಇದನ್ನೂ ಓದಿ: BMTC Package Tour-ಬಿಎಂಟಿಸಿಯಿಂದ ಅತೀ ಕಡಿಮೆ ಬೆಲೆಯಲ್ಲಿ ಟೂರ್ ಪ್ಯಾಕೇಜ್!
ವಿಶ್ವವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.
ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್ಎಸ್ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.
ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರಗರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.
ಇದನ್ನೂ ಓದಿ: Vokkaliga Nigama-ಒಕ್ಕಳಿಗ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಸೇರಿ ಒಟ್ಟು 7 ಯೋಜನೆಗೆ ಅರ್ಜಿ ಆಹ್ವಾನ!
ಕಳೆದ ಬಾರಿ ವಿದ್ಯುತ್ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.
ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.
ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.
ಕಳೆದ ವರ್ಷ ದಸರಾ ಆಹರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.
ಇದನ್ನೂ ಓದಿ: Ration card-ರೇಷನ್ ಕಾರ್ಡದಾರರಿಗೆ ಅಕ್ಕಿ ಬದಲು ಆಹಾರ ಕಿಟ್! ಇಲ್ಲಿದೆ ಸಂಪೂರ್ಣ ವಿವರ!
ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.
ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.
ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಅಗತ್ಯ ಪ್ರಮಾಣದಲ್ಲಿ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
ಗೋಲ್ಡ್ ಕಾರ್ಡ್ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.
ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
ಇದನ್ನೂ ಓದಿ: Ganga Kalyana-ಜಲಶಕ್ತಿ ಯೋಜನೆಯಡಿ ಬೋರ್ವೆಲ್ ಕೊರೆಸಲು ₹2.75 ಲಕ್ಷ ಸಹಾಯಧನಕ್ಕೆ ಅರ್ಜಿ!
ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.
ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ದ್ರೋಣ್ ಶೋ ಆಯೋಜಿಸಲಾಗುವುದು.
ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ಧಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.
ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54 ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಎಲ್ಲರಿಗೂ ಜಂಬೂಸವಾರಿ ವೀಕ್ಷಣೆಗೆ ಸೂಕ್ತ ಅವಕಾಶ ಮಾಡಿಕೊಡಲು ಕೈಗೊಳ್ಳಬೇಕಾಗಿದೆ.